ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ತನ್ನ ಯಜಮಾನ ನಿಗಾಗಿ ಕಾಯುವವನು ಸನ್ಮಾನ ಹೊಂದುವನು.
Cross references
ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.
ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು.
ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.
ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.
ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.
ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು.
ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು;
ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.
ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.
ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.
ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.