ಬೆಳ್ಳಿ ಬಂಗಾರ ಗಳ ಪುಟಕ್ಕೆ ಕುಲುಮೆ ಹೇಗೆಯೋ ಹಾಗೆಯೇ ತನ್ನ ಹೊಗಳಿಕೆಗೆ ಮನುಷ್ಯನಿದ್ದಾನೆ.
Cross references
ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.
ಕರ್ತನು ಅವನ ಸಂಗಡ ಇದ್ದನು. ಅವನು ಮಹಾಬುದ್ಧಿವಂತನಾಗಿ ನಡೆಯುವದನ್ನು ಸೌಲನು ನೋಡಿ ಅವನಿಗೆ ಭಯ ಪಟ್ಟಿದ್ದನು.
ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
ಬೆಳ್ಳಿಗೆ ಗಣಿಯೂ ಬಂಗಾರಕ್ಕೆ ಚೊಕ್ಕ ಮಾಡುವ ಸ್ಥಳವೂ ಉಂಟಲ್ಲಾ?
ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.
ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.