ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
Cross references
ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು.
ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.
ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು