ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
Cross references
ಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ;
ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;
ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.
ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.
ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.
ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.
ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.
ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!
ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.