ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.
Cross references
ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು.
ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.
ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.
ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು.
ನೀತಿವಂತರು ಚೆನ್ನಾಗಿದ್ದರೆ ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ ಆರ್ಭಟವಿರು ತ್ತದೆ.
ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು,
ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.