ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
Cross references
ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.
ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.
ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
ಆಗ ಮೆನಹೇಮನು ತಿಪ್ಸಹನ್ನೂ ಅದರಲ್ಲಿ ಇದ್ದ ಎಲ್ಲರನ್ನೂ ತಿರ್ಚ ಮೊದಲುಗೊಂಡು ಅದರ ಮೇರೆಗಳನ್ನೂ ಹಾಳುಮಾಡಿದನು. ಅವರು ತಮ್ಮ ಬಾಗಲುಗಳನ್ನು ತನಗೆ ತೆರೆಯದೆ ಇದ್ದದರಿಂದ ಅವರನ್ನು ಹೊಡೆದನು; ಅದರಲ್ಲಿರುವ ಗರ್ಭಿಣಿಯರನ್ನೆಲ್ಲಾ ಸೀಳಿಸಿದನು.
ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು.
ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ
ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.