Home Bibles ಸಾಮೇತಿಗಳು 28:17 · ಕನ್ನಡ ಬೈಬಲ್
ಸಾಮೇತಿಗಳು 28:17 · ಕನ್ನಡ ಬೈಬಲ್

ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.

Cross references

ಆದಿಕಾಂಡ 4:12

ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.

ಆದಿಕಾಂಡ 9:6

ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.

ನಿರ್ಗಮಕಾಂಡ 21:14

ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.

ಅಂಕೆಗಳ ಪುಸ್ತಕ 35:14

ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್‌ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.

ದ್ವಿತೀಯೋಪದೇಶಕಾಂಡ 19:11

ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ

2 ಸಮುವೇಲ 13:34

ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.

2 ಸಮುವೇಲ 18:15

ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.

1 ಅರಸುಗಳು 2:29

ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.

1 ಅರಸುಗಳು 21:19

ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.

1 ಅರಸುಗಳು 21:23

ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.

2 ಅರಸುಗಳು 9:26

ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.

2 ದಿನವೃತ್ತಾಂತ 24:21

ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.

ಮತ್ತಾಯ 27:4

ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.

ಅಪೋಸ್ತಲರ ಕೃತ್ಯಗಳು 28:4

ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.

Interlinear

Choose Theme