ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
Cross references
ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
ಆದರೆ ಅಬ್ಷಾಲೋಮನು ಓಡಿ ಹೋದನು; ಆಗ ಕಾವಲುಗಾರನು ತನ್ನ ಕಣ್ಣುಗಳ ನ್ನೆತ್ತಿ ನೋಡುವಾಗ ಇಗೋ, ಅವನ ಹಿಂಭಾಗದಲ್ಲಿ ಬೆಟ್ಟದ ಪಾರ್ಶ್ವದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು.
ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.
ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.
ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.