ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
Cross references
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.
ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.