ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
Cross references
ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.
ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.
ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು.
ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.
ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?
ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು.
ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ
ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.