ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
Cross references
ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು.
ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ
ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.