ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
Cross references
ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.
ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.
ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.