ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;
Cross references
ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.
ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ;
ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.
ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.
ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.