ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
Cross references
ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
ತನ್ನ ಯಜಮಾನನನ್ನು ಬಿಟ್ಟು ನಿನ್ನ ಬಳಿಗೆ ತಪ್ಪಿಸಿ ಕೊಂಡು ಬಂದ ದಾಸನನ್ನು ತನ್ನ ಯಜಮಾನನಿಗೆ ಒಪ್ಪಿಸಬಾರದು.
ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು.
ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?
ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
ನಿನ್ನ ಸೇವಕನು ನಿನ್ನನ್ನು ಶಪಿಸುವದನ್ನು ನೀನು ಕೇಳದಂತೆ ಆಡಿದ ಎಲ್ಲಾ ಮಾತುಗಳನ್ನು ನೀನು ಸಹ ಲಕ್ಷಿಸಬೇಡ;
ಹೀಗಿರಲು ಆ ಸಮಯದಲ್ಲಿ ಕಸ್ದೀಯರು ಯೆಹೂದ್ಯರ ಮೇಲೆ ದೂರು ಹೊರಿಸಲು ಸನ್ನಿಧಿಗೆ ಬಂದು
ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.