ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
Cross references
ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ.
ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು;
ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು.