ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
Cross references
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ.
ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು?
ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.
ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ.
ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ.
ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.