ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
Cross references
ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ.
ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ.
ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.
ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.
ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.
ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು.