Home Bibles ಸಾಮೇತಿಗಳು 31:30 · ಕನ್ನಡ ಬೈಬಲ್
ಸಾಮೇತಿಗಳು 31:30 · ಕನ್ನಡ ಬೈಬಲ್

ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.

Cross references

ನಿರ್ಗಮಕಾಂಡ 1:17

ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.

2 ಸಮುವೇಲ 14:25

ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.

ಎಸ್ತೇರ್ 1:11

ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.

ಕೀರ್ತನೆಗಳು 147:11

ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.

ಸಾಮೇತಿಗಳು 1:7

ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.

ಸಾಮೇತಿಗಳು 6:25

ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.

ಸಾಮೇತಿಗಳು 8:13

ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.

ಸಾಮೇತಿಗಳು 11:22

ಹಂದಿಯ ಮೂಗಿನಲ್ಲಿರುವ ಬಂಗಾರದ ಒಡವೆಯು ಹೇಗೋ ಹಾಗೆಯೇ ವಿವೇಕವಿಲ್ಲದ ಸುಂದರವಾದ ಸ್ತ್ರೀಯು ಇರುವಳು.

ಸಭಾಪ್ರಸಂಗಿ 7:18

ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.

ಸಭಾಪ್ರಸಂಗಿ 12:13

ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.

ಯೆಹೆಜ್ಕೇಲ 16:15

ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.

ಲೂಕ 1:6

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.

ಲೂಕ 1:46

ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;

ರೋಮಾಪುರದವರಿಗೆ 2:29

ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.

1 ಕೊರಿಂಥದವರಿಗೆ 4:5

ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.

ಯಾಕೋಬ 1:11

ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.

1 ಪೇತ್ರ 1:7

ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.

1 ಪೇತ್ರ 1:24

ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.

1 ಪೇತ್ರ 3:4

ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.

Interlinear

Choose Theme