ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
Cross references
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.
ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು.
ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
ಹಂದಿಯ ಮೂಗಿನಲ್ಲಿರುವ ಬಂಗಾರದ ಒಡವೆಯು ಹೇಗೋ ಹಾಗೆಯೇ ವಿವೇಕವಿಲ್ಲದ ಸುಂದರವಾದ ಸ್ತ್ರೀಯು ಇರುವಳು.
ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.