ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;
Cross references
ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
ಅವನೂ ರಾಜರೂ ಅವನ ಜೊತೆ ಡೇರೆಗಳಲ್ಲಿ ಕುಡಿಯುತ್ತಿರಲು ಈ ವಾರ್ತೆಯನ್ನು ಕೇಳುತ್ತಲೇ ಅವನು ತನ್ನ ಸೇವಕರಿಗೆ--ಸಿದ್ಧಮಾಡಿರಿ ಅಂದನು. ಹಾಗೆಯೆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.
ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ
ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು.
ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;