ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.
Cross references
ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.
ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.