ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
Cross references
ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;
ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.
ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.
ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.
ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ.
ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.
ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.
ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ
ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.