ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ.
Cross references
ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.