ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
Cross references
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.
ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
ವಿವೇಕವುಳ್ಳವನ ಹೃದಯವು ತಿಳುವಳಿಕೆಯನ್ನು ಹುಡುಕುತ್ತದೆ; ಬುದ್ಧಿಹೀನರ ಬಾಯಿಯು ಬುದ್ಧಿಹೀನತೆ ಯನ್ನೇ ತಿನ್ನುತ್ತದೆ.
ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಯಾಕೋಬಿನ ಮನೆತನದವ ರೆಂದು ಹೆಸರುಗೊಂಡವರೇ, ಕರ್ತನ ಆತ್ಮವು ಕಡಿಮೆ ಯಾಯಿತೋ? ಇವು ಆತನ ಕ್ರಿಯೆಗಳೋ? ಯಥಾ ರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೇದನ್ನು ಮಾಡುವದಿಲ್ಲವೋ?
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.