ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
Cross references
ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.
ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
ಓ ಕರ್ತನೇ, ನೀನು ಎಂದೆಂದಿಗೂ ಇರುತ್ತೀ. ನಿನ್ನ ಸಿಂಹಾಸನವು ತಲತಲಾಂತರಗಳ ವರೆಗೂ ಇರು ವದು.
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;