ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
Cross references
ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ.
ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.