ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
Cross references
ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗುವೆವು ಅಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.
ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು.
ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ?
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.
ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.