ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
Cross references
ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳು ಎತ್ತಲ್ಪಡುವವು.
ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು.
ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ; ಯುದ್ಧದಿಂದ ತಿರುಗಿಕೊಂಡು ಭದ್ರವಾಗಿ ಹಾದುಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊ ಳ್ಳುತ್ತೀರಿ.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.