ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
Cross references
ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ.
ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
ನನ್ನ ಜನರ ಸ್ತ್ರೀಯರನ್ನು ಅವರ ರಮ್ಯ ವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ; ಅವರ ಮಕ್ಕಳಿಂದ ನನ್ನ ಮಹಿಮೆಯನ್ನು ಎಂದೆಂದಿಗೂ ತೆಗೆದಿ ದ್ದೀರಿ.
ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.