ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
Cross references
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?