ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು.
Cross references
ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.
ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.
ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
ಆದರೆ ಐಗುಪ್ತದೇಶದಲ್ಲಿ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿ ದಕ್ಕೆ ಕರ್ತನು ಅವನನ್ನು ಕಳುಹಿಸಿದ ಸಮಸ್ತ ಗುರುತು ಗಳ ಮತ್ತು ಅದ್ಭುತಗಳ ವಿಷಯದಲ್ಲಿಯೂ
ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.
ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
ಅನ್ಯ ಜನರ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ತನ್ನ ಕೆಲಸಗಳ ಬಲವನ್ನು ಜನರಿಗೆ ತೋರಿಸಿದ್ದಾನೆ.
ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ.
ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.