ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ.
Cross references
ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.
ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.