ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು,
Cross references
ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.
ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.
ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು.
ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು.
ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.
ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.