ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
Cross references
ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.
ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು.
ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.
ಇಗೋ, ನಾನು ಯೊರ್ದನ್ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.
ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.
ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ.
ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.
ಇದಲ್ಲದೆ ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಒಪ್ಪಿಸಿಕೊಟ್ಟು ಅವರಿಗೆ ಮೇರೆಗಳನ್ನು ವಿಭಾಗಿಸಿಕೊಟ್ಟಿ. ಹೀಗೆಯೇ ಅವರು ಸೀಹೋನನ ದೇಶವನ್ನೂ ಹೆಷ್ಬೋನಿನ ಅರಸನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನು ಸ್ವಾಧೀನಮಾಡಿ ಕೊಂಡರು.
ಅವರು ಬಲವಾದ ಪಟ್ಟಣ ಗಳನ್ನೂ ರಸವತ್ತಾದ ಭೂಮಿಯನ್ನೂ ತೆಗೆದುಕೊಂಡು ಸಮಸ್ತ ಉತ್ತಮವಾದವುಗಳಿಂದ ತುಂಬಿದ ಮನೆ ಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇ ತೋಟ ಗಳನ್ನೂ ಇಪ್ಪೇತೋಪುಗಳನ್ನೂ ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಬಹಳವಾಗಿ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು ಪುಷ್ಟಿಯಾಗಿ ನಿನ್ನ ದೊಡ್ಡ ಉಪಕಾರದಲ್ಲಿ ಆನಂದಪಟ್ಟರು.
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.
ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--