Cross references
ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು.
ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ.
ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
ಅವನು ತನ್ನ ತಂದೆಯಾದ ದಾವೀದನ ಹಾಗೆ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಒಳ್ಳೇಯದನ್ನು ಮಾಡದೆ ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯಜನಾಂಗಗಳ ಅಸಹ್ಯವಾದವುಗಳ ಪ್ರಕಾರ ಅವನು ತನ್ನ ಮಗನನ್ನು ಬೆಂಕಿ ತುಳಿಯ ಮಾಡಿದನು.
ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.
ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.