ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
Cross references
ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.
ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.
ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ.
ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.
ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು.
ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.