Home Bibles ಕೀರ್ತನೆಗಳು 107:40 · ಕನ್ನಡ ಬೈಬಲ್
ಕೀರ್ತನೆಗಳು 107:40 · ಕನ್ನಡ ಬೈಬಲ್

ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.

Cross references

ನಿರ್ಗಮಕಾಂಡ 8:3

ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.

ನಿರ್ಗಮಕಾಂಡ 8:4

ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಸೇವಕರ ಮೇಲೆಯೂ ಕಪ್ಪೆಗಳು ಏರಿ ಬರುವವು ಎಂದು ಹೇಳು ಅಂದನು.

ನಿರ್ಗಮಕಾಂಡ 8:17

ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.

ನಿರ್ಗಮಕಾಂಡ 8:24

ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.

ದ್ವಿತೀಯೋಪದೇಶಕಾಂಡ 32:10

ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.

ಯೆಹೋಶುವ 10:24

ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.

ನ್ಯಾಯಾಧಿಪತಿಗಳು 1:6

ಆದರೆ ಅದೋನೀಬೆಜೆಕನು ಓಡಿಹೋದದರಿಂದ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಹಾಕಿ ದರು.

ನ್ಯಾಯಾಧಿಪತಿಗಳು 4:21

ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.

1 ಸಮುವೇಲ 5:9

ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.

1 ಸಮುವೇಲ 6:4

ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.

1 ಅರಸುಗಳು 21:19

ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.

2 ಅರಸುಗಳು 9:35

ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು.

ಯೋಬ 12:21

ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.

ಯೋಬ 12:24

ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.

ಕೀರ್ತನೆಗಳು 78:66

ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು.

ಕೀರ್ತನೆಗಳು 107:4

ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,

ಯೆಶಾಯ 23:8

ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?

ಯೆರೆಮಿಯ 13:15

ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.

ದಾನಿಯೇಲ 4:33

ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.

ದಾನಿಯೇಲ 5:5

ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.

ದಾನಿಯೇಲ 5:18

ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.

ಅಪೋಸ್ತಲರ ಕೃತ್ಯಗಳು 12:23

ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.

ಪ್ರಕಟನೆ 19:18

ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.

Interlinear

Choose Theme