ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
Cross references
ನದಿಯು ಕಪ್ಪೆಗಳನ್ನು ಅಧಿಕವಾಗಿ ಬರಮಾಡು ವದು; ಅವು ಏರಿ ನಿನ್ನ ಮನೆಯಲ್ಲಿಯೂ ನೀನು ಮಲಗುವ ಕೋಣೆಯಲ್ಲಿಯೂ ಹಾಸಿಗೆಯ ಮೇಲೂ ಸೇವಕರ ಮನೆಗಳಲ್ಲಿಯೂ ಜನರ ಮೇಲೆಯೂ ಒಲೆಗ ಳಲ್ಲಿಯೂ ಹಿಟ್ಟು ನಾದುವ ಕೊಣವಿಗೆಗಳಲ್ಲಿಯೂ ಬರುವವು.
ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಸೇವಕರ ಮೇಲೆಯೂ ಕಪ್ಪೆಗಳು ಏರಿ ಬರುವವು ಎಂದು ಹೇಳು ಅಂದನು.
ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.
ಕರ್ತನು ಹಾಗೆಯೇ ಮಾಡಿದನು; ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶ ದಲ್ಲಿಯೂ ತುಂಬಿಕೊಂಡವು; ಅವುಗಳಿಂದ ದೇಶವು ಕೆಟ್ಟುಹೋಯಿತು.
ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
ಆದರೆ ಅದೋನೀಬೆಜೆಕನು ಓಡಿಹೋದದರಿಂದ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಹಾಕಿ ದರು.
ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.
ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು.
ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು.
ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.
ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.