ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.
Cross references
ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ ಶಪಿಸುವ ನೀರು ಆಕೆ ಯೊಳಗೆ ಸೇರಿ ಕಹಿಯಾಗುವದು; ಅವಳ ಹೊಟ್ಟೆ ಉಬ್ಬಿ ತೊಡೆ ಕ್ಷೀಣವಾಗುವದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪವಾಗಿರುವಳು.
ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ
ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ.
ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ.
ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.