ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.
Cross references
ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ.
ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.
ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.