ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
Cross references
ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,
ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು.
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,
ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
ನಿನ್ನ ಆಜ್ಞೆಗಳ ದಾರಿಯಲ್ಲಿ ನನ್ನನ್ನು ನಡೆಯಮಾಡು; ಅದ ರಲ್ಲಿ ಸಂತೋಷಿಸುತ್ತೇನೆ.
ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
ಅವರ ಹೃದಯವು ಕೊಬ್ಬಿನ ಹಾಗೆ ಮಂದವಾಗಿದೆ; ನಾನು ನಿನ್ನ ನ್ಯಾಯಪ್ರಮಾಣದಲ್ಲಿ ಆನಂದಪಡುತ್ತೇನೆ.
ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ.
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ,
ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.