ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
Cross references
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
ಆದಕಾರಣ ನಾನು ಗೋಡೆಗೆ ಹಿಂದಾಗಿರುವ ತಗ್ಗಿನ ಸ್ಥಳಗಳಲ್ಲಿಯೂ ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು; ತಮ್ಮ ಕತ್ತಿಗಳನ್ನೂ ಈಟಿಗ ಳನ್ನೂ ಬಿಲ್ಲುಗಳನ್ನೂ ಹಿಡುಕೊಂಡಿರುವ ಜನವನ್ನು ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.
ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.
ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.
ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ.
ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು.
ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.