ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
Cross references
ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.
ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.
ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.
ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ.
ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ.
ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ.
ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು.
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.