ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ,
Cross references
ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.
ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.
ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.