ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.
Cross references
ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
ಅದಕ್ಕೆ ಅವನು--ಸೈನ್ಯಗಳ ದೇವರಾದ ಕರ್ತನಿಗೋಸ್ಕರ ನಾನು ಮಹಾ ರೋಷವು ಳ್ಳವನಾಗಿದ್ದೆನು; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಾರೆ ಅಂದನು.
ರೊಟ್ಟಿತಿನ್ನುವ ಪ್ರಕಾರ ನನ್ನ ಜನರನ್ನು ತಿಂದು ದೇವರನ್ನು ಸ್ಮರಿಸದೆ ಅಪರಾಧಮಾಡುವವರು ಅರಿ ಯರೋ?
ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?
ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.