Home Bibles ಕೀರ್ತನೆಗಳು 119:144 · ಕನ್ನಡ ಬೈಬಲ್
ಕೀರ್ತನೆಗಳು 119:144 · ಕನ್ನಡ ಬೈಬಲ್

ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.

Cross references

ಕೀರ್ತನೆಗಳು 19:9

ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.

ಕೀರ್ತನೆಗಳು 119:17

ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.

ಕೀರ್ತನೆಗಳು 119:34

ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.

ಕೀರ್ತನೆಗಳು 119:66

ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.

ಕೀರ್ತನೆಗಳು 119:73

ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.

ಕೀರ್ತನೆಗಳು 119:138

ನಿನ್ನ ಸಾಕ್ಷಿ ಗಳನ್ನು ನೀತಿಯಾಗಿಯೂ ಬಹು ನಂಬಿಕೆಯುಳ್ಳವು ಗಳಾಗಿಯೂ ಆಜ್ಞಾಪಿಸಿದ್ದೀ.

ಕೀರ್ತನೆಗಳು 119:151

ಓ ಕರ್ತನೇ, ನೀನು ಸವಿಾಪವೇ ಇದ್ದೀ; ನಿನ್ನ ಆಜ್ಞೆ ಗಳೆಲ್ಲಾ ಸತ್ಯವೇ.

ಕೀರ್ತನೆಗಳು 119:152

ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು.

ಕೀರ್ತನೆಗಳು 119:169

ಓ ಕರ್ತನೇ, ನನ್ನ ಕೂಗು ನಿನ್ನ ಸನ್ನಿಧಿಗೆ ಮುಟ್ಟಲಿ; ನಿನ್ನ ವಾಕ್ಯದ ಪ್ರಕಾರ ನನಗೆ ಜ್ಞಾನವನ್ನು ಕೊಡು.

ಸಾಮೇತಿಗಳು 4:4

ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.

ಸಾಮೇತಿಗಳು 7:2

ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.

ಸಾಮೇತಿಗಳು 10:21

ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.

ಯೆಶಾಯ 6:9

ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.

ಯೆಶಾಯ 27:11

ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.

ಯೆರೆಮಿಯ 4:22

ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.

ದಾನಿಯೇಲ 12:10

ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.

ಹೊಶೇಯ 4:6

ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.

ಮತ್ತಾಯ 5:18

ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯ 13:19

ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.

ಯೋಹಾನ 17:3

ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.

2 ಕೊರಿಂಥದವರಿಗೆ 4:6

ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.

1 ಪೇತ್ರ 1:23

ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.

1 ಯೋಹಾನ 5:20

ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್‌.

Interlinear

Choose Theme