ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.
Cross references
ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.
ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
ನಿನ್ನ ಸಾಕ್ಷಿ ಗಳನ್ನು ನೀತಿಯಾಗಿಯೂ ಬಹು ನಂಬಿಕೆಯುಳ್ಳವು ಗಳಾಗಿಯೂ ಆಜ್ಞಾಪಿಸಿದ್ದೀ.
ಓ ಕರ್ತನೇ, ನೀನು ಸವಿಾಪವೇ ಇದ್ದೀ; ನಿನ್ನ ಆಜ್ಞೆ ಗಳೆಲ್ಲಾ ಸತ್ಯವೇ.
ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು.
ಓ ಕರ್ತನೇ, ನನ್ನ ಕೂಗು ನಿನ್ನ ಸನ್ನಿಧಿಗೆ ಮುಟ್ಟಲಿ; ನಿನ್ನ ವಾಕ್ಯದ ಪ್ರಕಾರ ನನಗೆ ಜ್ಞಾನವನ್ನು ಕೊಡು.
ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.