Home Bibles ಕೀರ್ತನೆಗಳು 119:21 · ಕನ್ನಡ ಬೈಬಲ್
ಕೀರ್ತನೆಗಳು 119:21 · ಕನ್ನಡ ಬೈಬಲ್

ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.

Cross references

ನಿರ್ಗಮಕಾಂಡ 10:3

ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.

ನಿರ್ಗಮಕಾಂಡ 18:11

ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.

ದ್ವಿತೀಯೋಪದೇಶಕಾಂಡ 27:15

ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್‌ ಎಂದು ಹೇಳಲಿ.

ದ್ವಿತೀಯೋಪದೇಶಕಾಂಡ 27:26

ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ ಎಂದು ಹೇಳಬೇಕು.

ದ್ವಿತೀಯೋಪದೇಶಕಾಂಡ 28:15

ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ದ್ವಿತೀಯೋಪದೇಶಕಾಂಡ 30:19

ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.

ನೆಹೆಮ್ಯ 9:16

ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು.

ನೆಹೆಮ್ಯ 9:29

ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.

ಯೋಬ 40:11

ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.

ಕೀರ್ತನೆಗಳು 119:10

ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.

ಕೀರ್ತನೆಗಳು 119:78

ಕಾರಣವಿಲ್ಲದೆ ನನಗೆ ಕೇಡು ಮಾಡಿದ ಕಾರಣ ಅಹಂಕಾರಿಗಳು ನಾಚಿಕೆಪಡಲಿ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡುವೆನು.

ಕೀರ್ತನೆಗಳು 119:110

ದುಷ್ಟರು ನನಗೆ ಉರ್ಲು ಒಡ್ಡಿದ್ದಾರೆ. ಆದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.

ಕೀರ್ತನೆಗಳು 119:118

ನಿನ್ನ ನಿಯಮಗಳಿಂದ ತಪ್ಪಿದವರೆಲ್ಲರನ್ನು ನೀನು ತುಳಿದುಬಿಟ್ಟಿದ್ದೀ; ಅವರಲ್ಲಿ ಮೋಸವೂ ಸುಳ್ಳೂ ಇತ್ತು.

ಕೀರ್ತನೆಗಳು 138:6

ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.

ಯೆಶಾಯ 2:11

ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.

ಯೆಶಾಯ 10:12

ಆದಕಾರಣ, ಕರ್ತನು ಚೀಯೋನ್‌ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.

ಯೆಶಾಯ 42:24

ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.

ಯೆಶಾಯ 43:28

ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.

ಯೆಹೆಜ್ಕೇಲ 28:2

ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.

ದಾನಿಯೇಲ 4:37

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.

ದಾನಿಯೇಲ 5:22

ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ

ಮಲಾಕಿ 4:1

ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಲೂಕ 14:11

ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.

ಲೂಕ 18:14

ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಗಲಾತ್ಯದವರಿಗೆ 3:13

ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

ಯಾಕೋಬ 4:6

ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.

1 ಪೇತ್ರ 5:5

ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.

Interlinear

Choose Theme