ನಾನು ನಿನ್ನ ಸಾಕ್ಷಿಗಳನ್ನು ಕೈಕೊಂಡ ಕಾರಣ ನಿಂದೆಯನ್ನೂ ತಿರಸ್ಕಾರವನ್ನೂ ನನಗೆ ದೂರಮಾಡಿಬಿಡು.
Cross references
ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.
ನನ್ನ ಸ್ನೇಹಿತರೇ ನನ್ನನ್ನು ಹಾಸ್ಯಮಾಡುತ್ತಾರೆ; ದೇವರಿಗೆ ನನ್ನ ಕಣ್ಣೀರನ್ನು ಸುರಿಸುತ್ತೇನೆ.
ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?
ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ.
ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
ಪ್ರತಿ ದಿನವೂ ನಮ್ಮನ್ನು ಮೇಲುಗಳಿಂದ ತುಂಬಿಸು,ಕರ್ತನು ಅಂದರೆ ನಮ್ಮ ರಕ್ಷಣೆಯ ದೇವರು ಸ್ತುತಿ ಹೊಂದಲಿ. ಸೆಲಾ.
ನನಗೆ ಭಯಪಡಿಸುವ ಅವಮಾನದಿಂದ ನನ್ನನ್ನು ತೊಲಗಿಸು;
ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.