ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
Cross references
ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ.
ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು; ಆಗ ನಿನ್ನ ಬಾಯಿಯ ಸಾಕ್ಷಿಯನ್ನು ಕೈಕೊಳ್ಳುವೆನು.
ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು.
ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನ ಮೊರೆಯನ್ನು ಕೇಳು; ಓ ಕರ್ತನೇ, ನಿನ್ನ ವಿಧಿಯ ಪ್ರಕಾರ ನನ್ನನ್ನು ಉಜ್ಜೀವಿಸು.
ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು.
ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು.
ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.